ಹುಂಚ : ಹೊಂಬುಜದಲ್ಲಿ ನಡೆಯುತ್ತಿರುವ ವಾರ್ಷಿಕ ರಥಯಾತ್ರಾ ಮಹೋತ್ಸವದ ತೃತೀಯ ದಿನ ವಿವಿಧ ಧಾರ್ಮಿಕ ವಿಧಿ ವಿಧಾನಗಳು ನೆರವೇರಿದವು. ಜಲಾಗ್ನಿ ಹೋಮ, ಶ್ರೀ ಶಾಂತಿಚಕ್ರಾರಾಧನೆ ಹಾಗೂ ಶ್ರೀ ಬಲಿ ಉತ್ಸವಗಳು ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಮಹಾಸ್ವಾಮಿಗಳ ದಿವ್ಯ ಸಾನ್ನಿಧ್ಯದಲ್ಲಿ ನಡೆಯಿತು.


ರಾತ್ರಿ ವೇಳೆ ಪುಷ್ಪರಥೋತ್ಸವ ಮತ್ತು ಬೆಳ್ಳಿ ರಥೋತ್ಸವವು ಅಲಂಕೃತ ಶೋಭಾಯಾತ್ರೆಯೊಂದಿಗೆ ಸಂಭ್ರಮದಿಂದ ನಡೆಯಿತು. ವಾದ್ಯಘೋಷ, ಚಂಡೆವಾದನ ಮತ್ತು ಡೊಳ್ಳು ಕುಣಿತದ ನಡುವೆ ಭಕ್ತರು ರಾಜಬೀದಿಗಳಲ್ಲಿ ಉತ್ಸಾಹದಿಂದ ಭಾಗವಹಿಸಿದರು.












Leave a Reply