ರಿಪ್ಪನ್ ಪೇಟೆ: ಸಮೀಪದ ಕೆಂಚನಾಲ ಗ್ರಾಮದಲ್ಲಿ ಶ್ರೀ ಮಾರಿಕಾಂಬ ಯುವಕರ ಬಳಗದ ವತಿಯಿಂದ ಹಾಗೂ ಗ್ರಾಮಸ್ಥರ ಸಂಯುಕ್ತ ಆಶ್ರಯದಲ್ಲಿ ಭಾನುವಾರ (ಮಾ.29) ಬೆಳಿಗ್ಗೆ 10.00 ಗಂಟೆಗೆ ರಾಜ್ಯ ಮಟ್ಟದ ಟಗರಿನ ಕಾಳಗವನ್ನು ಆಯೋಜಿಸಲಾಗಿದೆ ಎಂದು ಸಂಘಟಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಲೆನಾಡು ಭಾಗದಲ್ಲಿ ಇದೇ ಮೊದಲ ಬಾರಿಗೆ ಇಂತಹ ರಾಜ್ಯ ಮಟ್ಟದ ಟಗರಿನ ಕಾಳಗ ನಡೆಯುತ್ತಿರುವುದು ವಿಶೇಷವಾಗಿದ್ದು, ಗ್ರಾಮೀಣ ಕ್ರೀಡೆಗಳನ್ನು ಉತ್ತೇಜಿಸುವ ದಿಕ್ಕಿನಲ್ಲಿ ಮಹತ್ವದ ಹೆಜ್ಜೆಯಾಗಿ ಪರಿಗಣಿಸಲಾಗಿದೆ. ಪರಂಪರೆಯಿಂದ ಬಂದಿರುವ ಟಗರಿನ ಕಾಳಗವು ಗ್ರಾಮೀಣ ಸಂಸ್ಕೃತಿ, ಸಂಪ್ರದಾಯ ಮತ್ತು ಮನರಂಜನೆಯನ್ನು ಒಟ್ಟುಗೂಡಿಸುವ ವೇದಿಕೆಯಾಗಿದೆ ಇದರಿಂದ ಸ್ಥಳೀಯ ಜನರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದೆ.

ಈ ಕಾರ್ಯಕ್ರಮದಲ್ಲಿ ವಿವಿಧ ಜಿಲ್ಲೆಗಳಿಂದ ಟಗರಿಗಳನ್ನು ತರಲಾಗುತ್ತಿದ್ದು, ಸ್ಪರ್ಧಾತ್ಮಕವಾಗಿ ಕಾಳಗ ನಡೆಯಲಿದೆ. ವಿಜೇತರಿಗೆ ಬಹುಮಾನಗಳನ್ನು ವಿತರಿಸುವ ವ್ಯವಸ್ಥೆಯನ್ನೂ ಆಯೋಜಕರು ಮಾಡಿದ್ದಾರೆ. ಭದ್ರತೆ ಹಾಗೂ ನಿಯಮಾವಳಿ ಪಾಲನೆಗೆ ವಿಶೇಷ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಲಾಗಿದೆ.
ಗ್ರಾಮಸ್ಥರು, ಕ್ರೀಡಾಭಿಮಾನಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಸಂಘಟಕರು ಮನವಿ ಮಾಡಿದ್ದಾರೆ. ಈ ಮೂಲಕ ಗ್ರಾಮೀಣ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಉದ್ದೇಶ ಹೊಂದಲಾಗಿದೆ.

















Leave a Reply