ಹೊಸನಗರ: ಶ್ರೀಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿ ಹೆಮ್ಮಾವತಿ ಅಮ್ಮನವರ ಸಹಕಾರದಿಂದ ಬಡವರ ನಿವೃತ್ತಿಕರ ಸೇವೆ ಮಾಡುವ ಭಾಗ್ಯ ನಮಗೆ ಲಭಿಸಿದೆ ಎಂದು ಯೋಜನಾಧಿಕಾರಿ ಪ್ರದೀಪ್ ಕೆ ತಿಳಿಸಿದ್ದಾರೆ.

ತಾಲೂಕಿನ ವಿವಿಧ ಗ್ರಾಮಗಳಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ಬಿ.ಸಿ. ಟ್ರಸ್ಟ್) ವತಿಯಿಂದ ಸುಮಾರು 85 ನಿವೃತ್ತಿಕರ ಕುಟುಂಬಗಳಿಗೆ ಮಾಸಾಶನ ನೀಡಲಾಗುತ್ತಿದೆ. ಇದರ ಅಂಗವಾಗಿ ಇಂದು ಹೆಮ್ಮಾವತಿ ಅಮ್ಮನವರ ಹುಟ್ಟುಹಬ್ಬದ ಪ್ರಯುಕ್ತ ಈ 85 ಕುಟುಂಬಗಳ ಮನೆಗಳಿಗೆ ಭೇಟಿ ನೀಡಿ ಹಣ್ಣು ಹಂಪಲು ವಿತರಣೆ ಮಾಡಲಾಯಿತು.
“ಬಡವರ ಜೀವನಮಟ್ಟ ಸುಧಾರಿಸಲು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ನಿರಂತರವಾಗಿ ಕೆಲಸ ಮಾಡುತ್ತಿದೆ. ಹೆಮ್ಮಾವತಿ ಅಮ್ಮನವರ ಆಶೀರ್ವಾದದಿಂದ ಹೆಚ್ಚು ಕುಟುಂಬಗಳಿಗೆ ಸಹಾಯ ನೀಡುವ ಕಾರ್ಯವನ್ನು ಮುಂದುವರಿಸುತ್ತೇವೆ.”
- ಪ್ರದೀಪ್ ಕೆ,ಯೋಜನಾಧಿಕಾರಿ
ತಾಲೂಕಿನಲ್ಲಿ ಒಟ್ಟು 85 ನಿವೃತ್ತಿಕರ ಕುಟುಂಬಗಳು ಈ ಯೋಜನೆಯಿಂದ ಪ್ರಯೋಜನ ಪಡೆಯುತ್ತಿದ್ದು, ಪ್ರತೀ ತಿಂಗಳು ಅವರಿಗೆ ಮಾಸಾಶನ ನೀಡಲಾಗುತ್ತಿದೆ. ಬಡವರ ಕಲ್ಯಾಣಕ್ಕಾಗಿ ಹಾಗೂ ಅಂಗವಿಕಲರಿಗೆ ಅಗತ್ಯ ಸಾಧನ-ಸಹಾಯಗಳನ್ನು ನೀಡುವ ಕಾರ್ಯವನ್ನು ಸಂಸ್ಥೆ ನಿರಂತರವಾಗಿ ಮುಂದುವರಿಸುತ್ತಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಸೇವೆ ಮಾಡುವ ಆಶಯವಿದೆ ಎಂದು ಅವರು ತಿಳಿಸಿದರು.

ಹಣ್ಣು ಹಂಪಲು ವಿತರಣಾ ಕಾರ್ಯಕ್ರಮದಲ್ಲಿ ಮೇಲ್ವಿಚಾರಕರಾದ ಶ್ಯಾಮಲಾ ಹಾಗೂ ಸೇವಾ ಪ್ರತಿನಿಧಿಗಳಾದ ಆಶಾ, ಶಾಂತಕುಮಾರಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

















Leave a Reply