ಹಾರಂಬಳ್ಳಿಯಲ್ಲಿ ಈಶ್ವರ ದೇವರ ಪುನಃ ಪ್ರತಿಷ್ಠಾಪನೆ – ವಿವಿಧ ಧಾರ್ಮಿಕ ಕಾರ್ಯಕ್ರಮ

Blue and Red Voter Education Banner 20260428 203900 0000 scaled ಹಾರಂಬಳ್ಳಿಯಲ್ಲಿ ಈಶ್ವರ ದೇವರ ಪುನಃ ಪ್ರತಿಷ್ಠಾಪನೆ - ವಿವಿಧ ಧಾರ್ಮಿಕ ಕಾರ್ಯಕ್ರಮ
Spread the love

ರಿಪ್ಪನ್ ಪೇಟೆ: ಮೀಪದ ಹಾರಂಬಳ್ಳಿ ಗ್ರಾಮದಲ್ಲಿ ಶ್ರೀ ಈಶ್ವರ ಹಾಗೂ ಪರಿವಾರ ದೇವರುಗಳ ಪುನಃ ಪ್ರತಿಷ್ಠಾಪನೆ ಮತ್ತು ನೂತನ ದೇವಾಲಯದ ಲೋಕಾಪರ್ಣ ಧಾರ್ಮಿಕ ಸಮಾರಂಭವು ಭಕ್ತಿಭಾವದಿಂದ ನಡೆಯಿತು.
ಕಾರ್ಯಕ್ರಮದಲ್ಲಿ ಮಳಲಿಮಠದ ಶ್ರೀ ಬ್ರಹ್ಮಶ್ರೀ ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಗಳು ದಿವ್ಯ ಸಾನ್ನಿಧ್ಯವಹಿಸಿ ಆಶೀರ್ವಚನ ನೀಡಿದರು.  “ಧಾರ್ಮಿಕ ಕಾರ್ಯಗಳ ಮೂಲಕ ಮಕ್ಕಳಿಗೆ ಉತ್ತಮ ಸಂಸ್ಕಾರ ಬೆಳೆಸುವುದು ಅಗತ್ಯ. ಧಾರ್ಮಿಕ ಆಚರಣೆ ಮತ್ತು ಸಂಸ್ಕಾರದಿಂದಲೇ ಜೀವನದಲ್ಲಿ ಯಶಸ್ಸು ಸಾಧ್ಯ” ಎಂದು ಹೇಳಿದರು.

img 20260427 wa0013909697091468430072 ಹಾರಂಬಳ್ಳಿಯಲ್ಲಿ ಈಶ್ವರ ದೇವರ ಪುನಃ ಪ್ರತಿಷ್ಠಾಪನೆ - ವಿವಿಧ ಧಾರ್ಮಿಕ ಕಾರ್ಯಕ್ರಮ

ಧರ್ಮಸಮಾರಂಭದ ಅಧ್ಯಕ್ಷತೆಯನ್ನು ಶ್ರೀ ಈಶ್ವರ ದೇವಸ್ಥಾನ ಸೇವಾ ಸಮಿತಿಯ ಅಧ್ಯಕ್ಷ ಸೀತಾರಾಮಯ್ಯ ಅವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ತಾ.ಪಂ. ಮಾಜಿ ಅಧ್ಯಕ್ಷ ವೀರೇಶ್ ಅಳವಳ್ಳಿ ಹಾಗೂ ತಳಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಬ್ಯಾಂಕ್ ಅಧ್ಯಕ್ಷ ಹೆಚ್.ಎಸ್. ದಿನೇಶ್ ಗೌಡ ಸೇರಿದಂತೆ ಹಲವರು ಉಪಸ್ಥಿತರಿದ್ದರು.

img 20260110 wa00003403501897317257785 ಹಾರಂಬಳ್ಳಿಯಲ್ಲಿ ಈಶ್ವರ ದೇವರ ಪುನಃ ಪ್ರತಿಷ್ಠಾಪನೆ - ವಿವಿಧ ಧಾರ್ಮಿಕ ಕಾರ್ಯಕ್ರಮ

ಸೋಮವಾರ ಬೆಳಿಗ್ಗೆ ಬ್ರಹ್ಮ ಮುಹೂರ್ತದಲ್ಲಿ ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಗಳ ದಿವ್ಯ ಸಾನ್ನಿಧ್ಯದಲ್ಲಿ ಶ್ರೀ ಈಶ್ವರ, ಶ್ರೀ ಬಸವಣ್ಣ, ಶ್ರೀ ಮಹಾಗಣಪತಿ, ಶ್ರೀ ದುರ್ಗಮ್ಮ ಹಾಗೂ ಶ್ರೀ ನಾಗ ದೇವರುಗಳ ಪುನಃ ಪ್ರತಿಷ್ಠಾಪನೆ ನೆರವೇರಿತು. ಬಳಿಕ ಕಲಶಾಭಿಷೇಕ, ಕುಂಭಾಭಿಷೇಕ, ರುದ್ರಾಭಿಷೇಕ, ವಿಶೇಷ ಪೂಜೆಗಳು ನೆರವೇರಿದವು.

ಕಾರ್ಯಕ್ರಮದ ನಂತರ ಮಧ್ಯಾಹ್ನ ಸಾರ್ವಜನಿಕರಿಗೆ ಸಾಮೂಹಿಕ ಅನ್ನಸಂತರ್ಪಣೆ ಆಯೋಜಿಸಲಾಗಿತ್ತು

img 20260423 wa00564061493795739485521 ಹಾರಂಬಳ್ಳಿಯಲ್ಲಿ ಈಶ್ವರ ದೇವರ ಪುನಃ ಪ್ರತಿಷ್ಠಾಪನೆ - ವಿವಿಧ ಧಾರ್ಮಿಕ ಕಾರ್ಯಕ್ರಮ

Leave a Reply

Your email address will not be published. Required fields are marked *