ಶಿವಮೊಗ್ಗ : ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರು ಹೊಸನಗರ ತಾಲೂಕಿನ ಹುಂಚದಲ್ಲಿರುವ ಐತಿಹಾಸಿಕ ಹೊಂಬುಜ ಜೈನ ಮಠಕ್ಕೆ ಭೇಟಿ ನೀಡಿ, ಮಠದ ಪೀಠಾಧಿಪತಿಗಳಾದ ದೇವೇಂದ್ರ ಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಸ್ವಾಮೀಜಿಗಳ ಆಶೀರ್ವಾದ ಪಡೆದರು.
ಭೇಟಿಯ ವೇಳೆ ಸಚಿವರು ಶ್ರೀಗಳಿಗೆ ಗೌರವ ಸಮರ್ಪಿಸಿ, ಕೆಲಕಾಲ ಸಾಮಾಜಿಕ ಹಾಗೂ ಅಭಿವೃದ್ಧಿ ಸಂಬಂಧಿತ ವಿಷಯಗಳ ಕುರಿತು ಮಾತುಕತೆ ನಡೆಸಿದರು. ಮಠದ ಧಾರ್ಮಿಕ, ಸಾಂಸ್ಕೃತಿಕ ಪರಂಪರೆ ಹಾಗೂ ಸೇವಾ ಕಾರ್ಯಗಳ ಕುರಿತು ಶ್ರೀಗಳಿಂದ ಮಾಹಿತಿ ಪಡೆದ ಸಚಿವರು, ಮಠದ ಸಮಾಜಮುಖಿ ಕಾರ್ಯಗಳನ್ನು ಶ್ಲಾಘಿಸಿದರು.
ಹೊಂಬುಜ ಜೈನ ಮಠವು ರಾಜ್ಯದ ಪ್ರಮುಖ ಜೈನ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾಗಿದ್ದು, ದೇಶದ ವಿವಿಧ ಭಾಗಗಳಿಂದ ಭಕ್ತರು ಹಾಗೂ ಪ್ರವಾಸಿಗರು ಭೇಟಿ ನೀಡುವ ಪ್ರಸಿದ್ಧ ತೀರ್ಥಕ್ಷೇತ್ರವಾಗಿದೆ. ಸಚಿವರ ಭೇಟಿ ಧಾರ್ಮಿಕ ಗೌರವದ ಜೊತೆಗೆ ಸ್ಥಳೀಯ ಅಭಿವೃದ್ಧಿ ಮತ್ತು ಜನಸಂಪರ್ಕದ ದೃಷ್ಟಿಯಿಂದಲೂ ಮಹತ್ವ ಪಡೆದಿತು.
ಭೇಟಿಯ ಅಂತ್ಯದಲ್ಲಿ ಮಠದ ಆಡಳಿತ ಮಂಡಳಿ ಸದಸ್ಯರು ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಆತ್ಮೀಯವಾಗಿ ಸ್ವಾಗತಿಸಿ ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಹಾಗೂ ಹೊಸನಗರ ತಾಲೂಕಿನ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಮತ್ತು ಸ್ಥಳೀಯ ಗಣ್ಯರು ಉಪಸ್ಥಿತರಿದ್ದು, ಸಚಿವರೊಂದಿಗೆ ಮಠದ ಕಾರ್ಯಕ್ರಮದಲ್ಲಿ ಭಾಗವಹಿಸಿದರು.














Leave a Reply