ನಾಳೆ(ಆ.4)ನಾರದ ಪುರಸ್ಕಾರ ಪ್ರದಾನ|ಪತ್ರಿಕೋದ್ಯಮ ಕ್ಷೇತ್ರದ 9 ಗಣ್ಯರಿಗೆ ಗೌರವ

Addaheading 20260803 205433 0000 ನಾಳೆ(ಆ.4)ನಾರದ ಪುರಸ್ಕಾರ ಪ್ರದಾನ|ಪತ್ರಿಕೋದ್ಯಮ ಕ್ಷೇತ್ರದ 9 ಗಣ್ಯರಿಗೆ ಗೌರವ
Spread the love

ಹೊಸನಗರ: ಗ್ರಾಮಭಾರತಿ ಟ್ರಸ್ಟ್ ಕಾರಣಗಿರಿ ಹಾಗೂ ಕಾರಣಗಿರಿ ಕಲಾದರ್ಶನ ಮಾಸಪತ್ರಿಕೆ ಆಶ್ರಯದಲ್ಲಿ ಪ್ರಥಮ ಸುದ್ದಿವಾಹಕ ನಾರದರ ಸಂಸ್ಮರಣಾರ್ಥ ನೀಡಲಾಗುವ ಪ್ರತಿಷ್ಠಿತ ‘ನಾರದ ಪುರಸ್ಕಾರ’ ಪ್ರದಾನ ಸಮಾರಂಭವು ಆಗಸ್ಟ್ 4ರಂದು ಸಂಜೆ 4 ಗಂಟೆಗೆ ಕಾರಣಗಿರಿಯ ಸಿದ್ಧಿವಿನಾಯಕ ಸಭಾಭವನದಲ್ಲಿ ನಡೆಯಲಿದೆ.

addaheading 20260803 205433 00001400608847989590896 ನಾಳೆ(ಆ.4)ನಾರದ ಪುರಸ್ಕಾರ ಪ್ರದಾನ|ಪತ್ರಿಕೋದ್ಯಮ ಕ್ಷೇತ್ರದ 9 ಗಣ್ಯರಿಗೆ ಗೌರವ

  ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾರಣಗಿರಿ ಕಲಾದರ್ಶನ ಮಾಸಪತ್ರಿಕೆಯ ಪ್ರಧಾನ ಸಂಪಾದಕರಾದ ಹಾದಿಗಲ್ಲು ಲಕ್ಷ್ಮೀನಾರಾಯಣ ವಹಿಸಲಿದ್ದು, ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಮಗ್ರ ಕರ್ನಾಟಕ ಪ್ರಾಂತದ ಪ್ರಚಾರ ಪ್ರಮುಖ್ ಅರುಣ್ ಕುಮಾರ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.
ಕಾರಣಗಿರಿ ರಾಷ್ಟೋತ್ಥಾನ ಬಳಗ ಹಾಗೂ ಶ್ರೀ ವಾದಿರಾಜ ಸಂಸ್ಕೃತಿ ಸಂವರ್ಧನಾ ಸಭಾ, ಹಾದಿಗಲ್ಲು ಸಹಯೋಗದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟ ಸೇವೆ ಸಲ್ಲಿಸಿರುವ ಗಣ್ಯರಿಗೆ ‘ನಾರದ ಪುರಸ್ಕಾರ’ ಪ್ರದಾನ ಮಾಡಿ ಗೌರವಿಸಲಾಗುವುದು ಎಂದು ಕಾರಣಗಿರಿ ಕಲಾದರ್ಶನ ಮಾಸಪತ್ರಿಕೆಯ ಸಂಪಾದಕ ಹಾಗೂ ಗ್ರಾಮಭಾರತಿ ಟ್ರಸ್ಟ್ ಅಧ್ಯಕ್ಷ ಹನಿಯ ರವಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
  ಈ ಸಾಲಿನ ನಾರದ ಪುರಸ್ಕಾರಕ್ಕೆ ಕನ್ನಡ ನ್ಯೂಸ್ ಅಂತರ್ಜಾಲ ಪತ್ರಿಕೆಯ ಸಂಪಾದಕ ರಘುಪತಿ ಯಾಜಿ, ಪರಿಸರ ಪತ್ರಕರ್ತ ರಘುನಂದನ್ ಭಟ್ ನರೂರ, ಆಕಾಶವಾಣಿಯ ನಿವೃತ್ತ ನಿರ್ದೇಶಕ ಡಾ. ಸುಧೀಂದ್ರ, ಹಿರಿಯ ಪತ್ರಿಕಾ ಪ್ರತಿನಿಧಿ ಗಣಪತಿ ಪಂಡಿತ್, ಹೊಸ ದಿಗಂತ ಪತ್ರಿಕೆಯ ಮಂಗಳೂರು ಆವೃತ್ತಿಯ ಪ್ರಧಾನ ವರದಿಗಾರ ಸುರೇಶ್ ಡಿ. ಪಳ್ಳಿ, ಟಿ.ವಿ. ವರದಿಗಾರ್ತಿ ಶೈಲಜಾ ಗೊರ್ನಮನೆ, ಹೊಸ ದಿಗಂತ ಶಿವಮೊಗ್ಗದ ಸಂಪಾದಕ ವಾದಿರಾಜ್ ಕಮರೂರು, ಶ್ರೀಧರ ಸಂದೇಶ ಸಂಪಾದಕ ಗಜಾನನ ಭಟ್ಟ ರೇವಣಕಟ್ಟ ಹಾಗೂ ಅಂಕಣಕಾರ-ಲೇಖಕ ಡಾ. ಗುರುರಾಜ ಪೋಶೆಟ್ಟಿಹಳ್ಳಿ ಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

img 20260803 wa00149211856147095587524 ನಾಳೆ(ಆ.4)ನಾರದ ಪುರಸ್ಕಾರ ಪ್ರದಾನ|ಪತ್ರಿಕೋದ್ಯಮ ಕ್ಷೇತ್ರದ 9 ಗಣ್ಯರಿಗೆ ಗೌರವ

Leave a Reply

Your email address will not be published. Required fields are marked *