ಸಾಗರ: ಅಕ್ರಮ ಮರಳು ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಸಾಗರ ತಾಲ್ಲೂಕಿನ ನೆಲ್ಲಿಬೀಡು ವೃತ್ತದ ಬಳಿ ನಡೆದಿದೆ.
ಮಳೂರು ಗ್ರಾಮದ ನಿವಾಸಿ ನೀಲಕುಮಾರ್ ಜೈನ್ ಹಾಗೂ ಅವರ ಪುತ್ರಿ ಅರ್ಚನಾ ಬೈಕ್ನಲ್ಲಿ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ತಂದೆ-ಮಗಳು ನೆಲ್ಲಿಬೀಡು ವೃತ್ತದ ರಸ್ತೆಯಲ್ಲಿ ಸಾಗುತ್ತಿದ್ದ ವೇಳೆ, ಅದೇ ಮಾರ್ಗದಲ್ಲಿ ಬಂದ ಅಕ್ರಮ ಮರಳು ತುಂಬಿದ ಟಿಪ್ಪರ್ ಲಾರಿ ಬೈಕ್ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಡಿಕ್ಕಿಯ ರಭಸಕ್ಕೆ ಬೈಕ್ನ ಹಿಂಬದಿಯಲ್ಲಿ ಕುಳಿತಿದ್ದ ಅರ್ಚನಾ ರಸ್ತೆಗೆ ಬಿದ್ದಿದ್ದಾರೆ. ಈ ವೇಳೆ ಟಿಪ್ಪರ್ನ ಬೃಹತ್ ಚಕ್ರ ಅವರ ತಲೆ ಭಾಗದ ಮೇಲೆ ಹರಿದ ಪರಿಣಾಮ ಗಂಭೀರವಾಗಿ ಗಾಯಗೊಂಡು, ಸ್ಥಳದಲ್ಲೇ ತಂದೆಯ ಕಣ್ಣೆದುರೇ ಮಗಳ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಘಟನೆಯಿಂದ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಹಿತಿ ತಿಳಿದು ಕಾರ್ಗಲ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಕುರಿತು ಕಾರ್ಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತಕ್ಕೆ ಕಾರಣ ಹಾಗೂ ಟಿಪ್ಪರ್ ಚಾಲಕನ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

















Leave a Reply