ಆಗುಂಬೆ ಘಾಟಿಯಲ್ಲಿ ಭಾರಿ ವಾಹನ ಸಂಚಾರಕ್ಕೆ ಬ್ರೇಕ್: ಜೂನ್ 15ರಿಂದ ಮಳೆಗಾಲ ಮುಗಿಯುವವರೆಗೆ ನಿಷೇಧ

Screenshot 20260611 211043 Canva ಆಗುಂಬೆ ಘಾಟಿಯಲ್ಲಿ ಭಾರಿ ವಾಹನ ಸಂಚಾರಕ್ಕೆ ಬ್ರೇಕ್: ಜೂನ್ 15ರಿಂದ ಮಳೆಗಾಲ ಮುಗಿಯುವವರೆಗೆ ನಿಷೇಧ
Spread the love
img 20260110 wa00008619269423636556686 ಆಗುಂಬೆ ಘಾಟಿಯಲ್ಲಿ ಭಾರಿ ವಾಹನ ಸಂಚಾರಕ್ಕೆ ಬ್ರೇಕ್: ಜೂನ್ 15ರಿಂದ ಮಳೆಗಾಲ ಮುಗಿಯುವವರೆಗೆ ನಿಷೇಧ
1516988264962057142138394 ಆಗುಂಬೆ ಘಾಟಿಯಲ್ಲಿ ಭಾರಿ ವಾಹನ ಸಂಚಾರಕ್ಕೆ ಬ್ರೇಕ್: ಜೂನ್ 15ರಿಂದ ಮಳೆಗಾಲ ಮುಗಿಯುವವರೆಗೆ ನಿಷೇಧ

ಶಿವಮೊಗ್ಗ: ರಾಷ್ಟ್ರೀಯ ಹೆದ್ದಾರಿ 169ಎರ ಆಗುಂಬೆ ಘಾಟಿ ಮಾರ್ಗದಲ್ಲಿ ಭಾರಿ ವಾಹನಗಳ ಸಂಚಾರವನ್ನು ಜೂನ್ 15, 2026ರಿಂದ ಮಳೆಗಾಲ ಮುಗಿಯುವವರೆಗೆ ತಾತ್ಕಾಲಿಕವಾಗಿ ನಿಷೇಧಿಸಿ ಶಿವಮೊಗ್ಗ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಆದೇಶ ಹೊರಡಿಸಿದ್ದಾರೆ.

ಹುಲಿಕಲ್ ಘಾಟಿಯಲ್ಲಿ ಸಂಭವಿಸಿರುವ ಭೂಕುಸಿತದ ಹಿನ್ನೆಲೆಯಲ್ಲಿ ಶಿವಮೊಗ್ಗ–ಹೊಸನಗರ–ಮಾಸ್ತಿಕಟ್ಟೆ ಮಾರ್ಗದ ಮೂಲಕ ಕುಂದಾಪುರ ಹಾಗೂ ಉಡುಪಿಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ತಾತ್ಕಾಲಿಕ ರಕ್ಷಣಾತ್ಮಕ ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ. ಇದರಿಂದಾಗಿ ಆಗುಂಬೆ ಘಾಟಿಯಲ್ಲಿ ಜಲ್ಲಿ ಹಾಗೂ ಇತರೆ ಸರಕು ಸಾಗಾಣಿಕೆ ವಾಹನಗಳ ಓಡಾಟ ಹೆಚ್ಚಾಗಿದ್ದು, ಮಳೆಗಾಲದಲ್ಲಿ ಅಪಾಯದ ಸಾಧ್ಯತೆ ಹೆಚ್ಚಿದೆ.

img 20260611 wa00415407683169125420248 ಆಗುಂಬೆ ಘಾಟಿಯಲ್ಲಿ ಭಾರಿ ವಾಹನ ಸಂಚಾರಕ್ಕೆ ಬ್ರೇಕ್: ಜೂನ್ 15ರಿಂದ ಮಳೆಗಾಲ ಮುಗಿಯುವವರೆಗೆ ನಿಷೇಧ

ಜಿಲ್ಲಾಡಳಿತದ ಮಾಹಿತಿ ಪ್ರಕಾರ, ಮುಂದಿನ ದಿನಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾದಲ್ಲಿ ಘಾಟಿಯ ವಿವಿಧ ಪ್ರದೇಶಗಳಲ್ಲಿ ರಸ್ತೆ ಬದಿಯ ಭೂಕುಸಿತ, ಅಪಘಾತಗಳು ಹಾಗೂ ಸಾರ್ವಜನಿಕ ಸಂಚಾರಕ್ಕೆ ಅಡಚಣೆ ಉಂಟಾಗುವ ಸಾಧ್ಯತೆ ಇದೆ. ಅಲ್ಲದೆ, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಹಾಗೂ ಹಾವೇರಿ ಜಿಲ್ಲೆಗಳ ಜನರು ಆರೋಗ್ಯ ಸೇರಿದಂತೆ ತುರ್ತು ಅಗತ್ಯಗಳಿಗಾಗಿ ಮಣಿಪಾಲ್, ಉಡುಪಿ ಮತ್ತು ಮಂಗಳೂರಿಗೆ ತೆರಳುವ ಸಂಪರ್ಕಕ್ಕೂ ತೊಂದರೆ ಉಂಟಾಗುವ ಆತಂಕವಿದೆ.
ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ.
ಪರ್ಯಾಯ ಮಾರ್ಗಗಳು
ತೀರ್ಥಹಳ್ಳಿಯಿಂದ ಉಡುಪಿ ಕಡೆಗೆ ತೆರಳುವ ಭಾರಿ ವಾಹನಗಳು:
ತೀರ್ಥಹಳ್ಳಿ – ನಗರ – ನಾಗೋಡಿ – ಕೊಲ್ಲೂರು – ಕುಂದಾಪುರ – ಉಡುಪಿ ಮಾರ್ಗ
ತೀರ್ಥಹಳ್ಳಿ – ಶೃಂಗೇರಿ – ಕೆರೆಕಟ್ಟೆ – ಬಜಗೋಳಿ – ಕಾರ್ಕಳ – ಉಡುಪಿ ಮಾರ್ಗ
ಉಡುಪಿಯಿಂದ ತೀರ್ಥಹಳ್ಳಿ ಕಡೆಗೆ ಬರುವ ಭಾರಿ ವಾಹನಗಳು:
ಉಡುಪಿ – ಕುಂದಾಪುರ – ಕೊಲ್ಲೂರು – ನಾಗೋಡಿ – ನಗರ – ತೀರ್ಥಹಳ್ಳಿ ಮಾರ್ಗ
ಉಡುಪಿ – ಕಾರ್ಕಳ – ಬಜಗೋಳಿ – ಕೆರೆಕಟ್ಟೆ – ಶೃಂಗೇರಿ – ತೀರ್ಥಹಳ್ಳಿ ಮಾರ್ಗ


ಜಿಲ್ಲಾಡಳಿತದ ಈ ಆದೇಶ ಜೂನ್ 15ರಿಂದ ಜಾರಿಗೆ ಬರಲಿದ್ದು, ಮಳೆಗಾಲ ಮುಗಿಯುವವರೆಗೆ ಅನ್ವಯವಾಗಲಿದೆ.

img 20260604 wa00391903128135156606622 ಆಗುಂಬೆ ಘಾಟಿಯಲ್ಲಿ ಭಾರಿ ವಾಹನ ಸಂಚಾರಕ್ಕೆ ಬ್ರೇಕ್: ಜೂನ್ 15ರಿಂದ ಮಳೆಗಾಲ ಮುಗಿಯುವವರೆಗೆ ನಿಷೇಧ

Leave a Reply

Your email address will not be published. Required fields are marked *