ಹೊಸನಗರ ಹಾಗೂ ಸಾಗರ,ತೀರ್ಥಹಳ್ಳಿ ತಾಲೂಕಿನಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆ ಮತ್ತು ಬಿರುಗಾಳಿಯ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ನಾಳೆ ಜುಲೈ 7 (ಮಂಗಳವಾರ) ಎಲ್ಲಾ ಶಾಲೆಗಳು, ಕಾಲೇಜು ಹಾಗೂ ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಲಾಗಿದೆ.
ಸಾಗರ ಹಾಗೂ ಹೊಸನಗರ ತಾಲೂಕಿನಲ್ಲಿ ಭಾರಿ ಮಳೆಯೊಂದಿಗೆ ಗಾಳಿ ತೀವ್ರವಾಗಿ ಬೀಸುತ್ತಿರುವುದರಿಂದ ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ. ಈ ಕುರಿತು ಸಾಗರ ತಹಶೀಲ್ದಾರ್ ಪ್ರತಿಮಾ ಹಾಗೂ ಹೊಸನಗರ ತಹಶೀಲ್ದಾರ್ ಭರತ್ ರಾಜ್, ತೀರ್ಥಹಳ್ಳಿ ತಹಸೀಲ್ದಾರ್ ರಂಜಿತ್ ಪ್ರತ್ಯೇಕ ಆದೇಶ ಹೊರಡಿಸಿದ್ದಾರೆ.
ಹೊಸನಗರ : ಅಂಗನವಾಡಿ ಕೇಂದ್ರ, ಸರ್ಕಾರಿ,ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಶಾಲೆಗಳು, ಪ್ರೌಢಶಾಲೆಗಳು, ಪಿಯು ಕಾಲೇಜುಗಳಿಗೆ ರಜೆ ಅನ್ವಯವಾಗಲಿದೆ.
ಸಾಗರ :ಅಂಗನವಾಡಿ ಕೇಂದ್ರ,ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಶಾಲೆಗಳು, ಪ್ರೌಢಶಾಲೆಗಳು, ಪಿಯು , ಡಿಪ್ಲೋಮ, ಪದವಿ ಕಾಲೇಜುಗಳಿಗೆ ರಜೆ ಅನ್ವಯವಾಗಲಿದೆ.
ತೀರ್ಥಹಳ್ಳಿ :ಅಂಗನವಾಡಿ ಕೇಂದ್ರ,ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಶಾಲೆಗಳು, ಪ್ರೌಢಶಾಲೆಗಳು, ಪಿಯು , ಡಿಪ್ಲೋಮ, ಪದವಿ ಕಾಲೇಜುಗಳಿಗೆ ರಜೆ ಅನ್ವಯವಾಗಲಿದೆ.
ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಪಾಲಕರು ಅಗತ್ಯ ಮುನ್ನೆಚ್ಚರಿಕೆ ವಹಿಸಿ, ಅನಗತ್ಯವಾಗಿ ಮಕ್ಕಳನ್ನು ಹೊರಗೆ ಕರೆದುಕೊಂಡು ಹೋಗದಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.














Leave a Reply