ರಿಪ್ಪನ ಪೇಟೆ : ರಾಜ್ಯ ಕೃಷಿಕ ಸಮಾಜದ ರಾಜ್ಯಾಧ್ಯಕ್ಷರಾಗಿರುವ ಮಹದೇವಪ್ಪ ಅವರು ರಿಪ್ಪನ್ ಪೇಟೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಭೇಟಿ ನೀಡಿದರು.
ಸಹಕಾರ ಕ್ಷೇತ್ರದ ಕುರಿತು ಮತ್ತು ಈ ಭಾಗದ ಕೃಷಿಕರ ಸಮಸ್ಯೆಗಳು ಸೇರಿದಂತೆ ಆಗುಹೋಗುಗಳ ಬಗ್ಗೆ ಸಂಘದವರೊಂದಿಗೆ ಚರ್ಚಿಸಿದ್ದರು.ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ರಾಜ್ಯಾಧ್ಯಕ್ಷರಾದ ಮಹದೇವಪ್ಪ ನವರಿಗೆ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರು ಮತ್ತು ರಾಜ್ಯ ಸಹಕಾರಿ ರತ್ನ ಪ್ರಶಸ್ತಿ ಪುರಸ್ಕೃತರಾದ ಎಂ ಎಂ ಪರಮೇಶ್ವರ್, ಸಹಕಾರ ಯೂನಿಯನ್ ನ ಅಧ್ಯಕ್ಷರಾದ ವಾಟಗೋಡು ಸುರೇಶ್, ಉಪಾಧ್ಯಕ್ಷರಾದ ಜೇನಿ ರಾಜು, ಗಿರೀಶ್ ಹೆದ್ದಾರಿಪುರ ಮತ್ತು ಸಿಬ್ಬಂದಿ ವರ್ಗ ಹಾಜರಿದ್ದರು.
ರಿಪ್ಪನ್ ಪೇಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಕೃಷಿಕ ಸಮಾಜದ ರಾಜ್ಯಾಧ್ಯಕ್ಷ ಮಹದೇವಪ್ಪ ಭೇಟಿ















Leave a Reply