ವಿದ್ಯಾರ್ಥಿಗಳ ಹಿತಕ್ಕಾಗಿ ಎಬಿವಿಪಿ ಧ್ವನಿ: ಹಲವು ಪ್ರಮುಖಬೇಡಿಕೆಗಳನ್ನು ಕುವೆಂಪು ವಿಶ್ವವಿದ್ಯಾಲಯದ ಮುಂದಿಟ್ಟ ಸಂಘಟನೆ, ವಿದ್ಯಾರ್ಥಿಗಳ ಸಮಸ್ಯೆಗಳಿಗೆ ತ್ವರಿತ ಪರಿಹಾರಕ್ಕೆ ಒತ್ತಾಯ

Blue and Red Voter Education Banner 20260429 225134 0000 scaled ವಿದ್ಯಾರ್ಥಿಗಳ ಹಿತಕ್ಕಾಗಿ ಎಬಿವಿಪಿ ಧ್ವನಿ: ಹಲವು ಪ್ರಮುಖಬೇಡಿಕೆಗಳನ್ನು ಕುವೆಂಪು ವಿಶ್ವವಿದ್ಯಾಲಯದ ಮುಂದಿಟ್ಟ ಸಂಘಟನೆ, ವಿದ್ಯಾರ್ಥಿಗಳ ಸಮಸ್ಯೆಗಳಿಗೆ ತ್ವರಿತ ಪರಿಹಾರಕ್ಕೆ ಒತ್ತಾಯ
Spread the love

ಶಿವಮೊಗ್ಗ:ಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ವತಿಯಿಂದ ಕುವೆಂಪು ವಿಶ್ವವಿದ್ಯಾಲಯದಲ್ಲಿನ ವಿವಿಧ ಸಮಸ್ಯೆಗಳ ಕುರಿತು ಏಪ್ರಿಲ್ 28 ರಂದು ಬೃಹತ್ ಪ್ರತಿಭಟನೆ ನಡೆಸಲಾಗಿತ್ತು. ಪ್ರತಿಭಟನೆಯ ನಂತರ ಕುಲಪತಿಗಳ ಭೇಟಿಗೆ ಸಮಯ ನಿಗದಿಯಾಗಿದ್ದು, ಅದರಂತೆ ಏಪ್ರಿಲ್ 29ರಂದು ಎಬಿವಿಪಿ ನಿಯೋಗವು ವಿಶ್ವವಿದ್ಯಾಲಯದ ಉಪಕುಲಪತಿಗಳನ್ನು ಭೇಟಿ ಮಾಡಿ ಸಮಗ್ರ ಚರ್ಚೆ ನಡೆಸಿತು.

img 20260429 wa00993297533586042474128 ವಿದ್ಯಾರ್ಥಿಗಳ ಹಿತಕ್ಕಾಗಿ ಎಬಿವಿಪಿ ಧ್ವನಿ: ಹಲವು ಪ್ರಮುಖಬೇಡಿಕೆಗಳನ್ನು ಕುವೆಂಪು ವಿಶ್ವವಿದ್ಯಾಲಯದ ಮುಂದಿಟ್ಟ ಸಂಘಟನೆ, ವಿದ್ಯಾರ್ಥಿಗಳ ಸಮಸ್ಯೆಗಳಿಗೆ ತ್ವರಿತ ಪರಿಹಾರಕ್ಕೆ ಒತ್ತಾಯ
ಎಬಿವಿಪಿ ವತಿಯಿಂದ ಏಪ್ರಿಲ್ 28 ರಂದು ನಡೆದ ಬೃಹತ್ ಪ್ರತಿಭಟನೆ

ಸಭೆಯಲ್ಲಿ ವಿದ್ಯಾರ್ಥಿಗಳು ಎದುರಿಸುತ್ತಿರುವ ಹಲವು ಪ್ರಮುಖ ಸಮಸ್ಯೆಗಳ ಕುರಿತು ವಿವರವಾಗಿ ಮನವಿ ಮಾಡಲಾಯಿತು. ಈ ವೇಳೆ ಉಪಕುಲಪತಿಗಳು ಹಾಗೂ ಕುಲಸಚಿವರು ವಿದ್ಯಾರ್ಥಿಗಳ ಎಲ್ಲಾ ಅಹವಾಲುಗಳನ್ನು ಆಲಿಸಿ, ಸಮಸ್ಯೆಗಳನ್ನು ಶೀಘ್ರದಲ್ಲೇ ಪರಿಹರಿಸುವ ಭರವಸೆ ನೀಡಿದರು.

img 20260429 wa00903323646481166733467 ವಿದ್ಯಾರ್ಥಿಗಳ ಹಿತಕ್ಕಾಗಿ ಎಬಿವಿಪಿ ಧ್ವನಿ: ಹಲವು ಪ್ರಮುಖಬೇಡಿಕೆಗಳನ್ನು ಕುವೆಂಪು ವಿಶ್ವವಿದ್ಯಾಲಯದ ಮುಂದಿಟ್ಟ ಸಂಘಟನೆ, ವಿದ್ಯಾರ್ಥಿಗಳ ಸಮಸ್ಯೆಗಳಿಗೆ ತ್ವರಿತ ಪರಿಹಾರಕ್ಕೆ ಒತ್ತಾಯ

ಪ್ರಮುಖ ಬೇಡಿಕೆಗಳು: ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಎಬಿವಿಪಿ ಯಿಂದ ಮಂಡಿಸಲಾದ ಈ ಬೇಡಿಕೆಗಳಲ್ಲಿ, ವಿಶ್ವವಿದ್ಯಾಲಯದ ಪರೀಕ್ಷಾ ಶುಲ್ಕ ಹಾಗೂ ಪ್ರವೇಶಾತಿ ಶುಲ್ಕವನ್ನು ಹೆಚ್ಚಿಸಿರುವುದನ್ನು ಮರುಪರಿಶೀಲಿಸುವಂತೆ ಒತ್ತಾಯಿಸಲಾಗಿದೆ. ವಿಶ್ವವಿದ್ಯಾಲಯ ವ್ಯಾಪ್ತಿಯ ವಿದ್ಯಾರ್ಥಿಗಳಿಗೆ ಸುಲಭ ಸೇವೆ ಒದಗಿಸಲು ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಪ್ರಾದೇಶಿಕ ಕೇಂದ್ರಗಳನ್ನು ಸ್ಥಾಪಿಸುವ ಅಗತ್ಯವಿದೆ ಎಂದು ತಿಳಿಸಲಾಗಿದೆ.


ಪರೀಕ್ಷಾ ವ್ಯವಸ್ಥೆಯಲ್ಲಿ ಗುಣಾತ್ಮಕತೆ ಹೆಚ್ಚಿಸುವ ಉದ್ದೇಶದಿಂದ ಉತ್ತರಪತ್ರಿಕೆಗಳ ಮೌಲ್ಯಮಾಪನದ ಮಟ್ಟವನ್ನು ಸುಧಾರಿಸಬೇಕು ಎಂದು ಮನವಿ ಮಾಡಲಾಗಿದೆ. ಜೊತೆಗೆ, ವಿದ್ಯಾರ್ಥಿಗಳ ಕುಂದುಕೊರತೆಗಳನ್ನು ತ್ವರಿತವಾಗಿ ಪರಿಹರಿಸಲು ಹೆಲ್ಪ್‌ಲೈನ್ ದೂರವಾಣಿ ಸಂಖ್ಯೆ ಹಾಗೂ ಸ್ಟೂಡೆಂಟ್ಸ್ ಗ್ರೀವಿಯನ್ಸ್ ಸೆಲ್ ಅನ್ನು ಕಾಲೇಜು ಮತ್ತು ವಿಶ್ವವಿದ್ಯಾಲಯ ಮಟ್ಟದಲ್ಲಿ ಸ್ಥಾಪಿಸುವಂತೆ ಆಗ್ರಹಿಸಲಾಗಿದೆ.

img 20260429 wa00938588059818478626267 ವಿದ್ಯಾರ್ಥಿಗಳ ಹಿತಕ್ಕಾಗಿ ಎಬಿವಿಪಿ ಧ್ವನಿ: ಹಲವು ಪ್ರಮುಖಬೇಡಿಕೆಗಳನ್ನು ಕುವೆಂಪು ವಿಶ್ವವಿದ್ಯಾಲಯದ ಮುಂದಿಟ್ಟ ಸಂಘಟನೆ, ವಿದ್ಯಾರ್ಥಿಗಳ ಸಮಸ್ಯೆಗಳಿಗೆ ತ್ವರಿತ ಪರಿಹಾರಕ್ಕೆ ಒತ್ತಾಯ

ಶೈಕ್ಷಣಿಕ ಪ್ರಕ್ರಿಯೆಯಲ್ಲಿ ತಂತ್ರಜ್ಞಾನದ ಪರಿಣಾಮಕಾರಿ ಬಳಕೆಗೆ ಕಾಲೇಜು ಶಿಕ್ಷಕರಿಗೆ UUCMS ಕುರಿತು ಸಮರ್ಪಕ ತರಬೇತಿ ನೀಡಬೇಕೆಂದು ತಿಳಿಸಲಾಗಿದೆ. ಡಿಜಿಲಾಕರ್‌ನಲ್ಲಿ ದೊರೆಯುತ್ತಿರುವ ಅಂಕಪಟ್ಟಿಗಳಲ್ಲಿ ಇರುವ ದೋಷಗಳನ್ನು ತಿದ್ದುಪಡಿ ಮಾಡಿ, ಅವುಗಳನ್ನು ವಿದ್ಯಾರ್ಥಿಗಳಿಗೆ ಶೀಘ್ರವಾಗಿ ಲಭ್ಯವಾಗುವಂತೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಲಾಗಿದೆ.
ಇದರೊಂದಿಗೆ, ಪ್ರತಿ ವರ್ಷ ನಿಯಮಿತವಾಗಿ ಘಟಿಕೋತ್ಸವವನ್ನು ಆಯೋಜಿಸುವುದು, ಡಿಜಿಟಲ್ ಮೌಲ್ಯಮಾಪನದಲ್ಲಿನ ತೊಂದರೆಗಳನ್ನು ಬಗೆಹರಿಸುವುದು ಹಾಗೂ ಪ್ರತಿ ಸೆಮಿಸ್ಟರ್ ಫಲಿತಾಂಶಗಳನ್ನು ನಿಗದಿತ ಸಮಯದಲ್ಲಿ ಪ್ರಕಟಿಸುವುದು ಸೇರಿದಂತೆ ಹಲವು ವಿಷಯಗಳನ್ನು ಎಬಿವಿಪಿ ಒತ್ತಾಯಿಸಿದೆ.

ಈ ಸಂದರ್ಭದಲ್ಲಿ  ಪ್ರಾಂತ ಸಹಕಾರ್ಯದರ್ಶಿ ಯಶವಂತ ನಟರಾಜ್,ಶಿವಮೊಗ್ಗ ವಿಭಾಗದ ವಿಭಾಗ ಸಂಚಾಲಕ ರವಿ ಇರೋಜಿ ಹಾಗೂ ಶಿವಮೊಗ್ಗ ಜಿಲ್ಲೆಯ ಜಿಲ್ಲಾಸಂಘಟನಾ ಕಾರ್ಯದರ್ಶಿ ಆದಿತ್ಯ ಶೆಟ್ಟಿ ಮತ್ತು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನ ಕಾರ್ಯಕರ್ತರು ಉಪಸ್ಥಿತರಿದ್ದರು.


ಒಟ್ಟಾರೆ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಎಬಿವಿಪಿ ನಡೆಸಿದ ಪ್ರತಿಭಟನೆಗೆ ಸ್ಪಂದಿಸಿರುವ ವಿಶ್ವವಿದ್ಯಾಲಯ ಆಡಳಿತವು, ಸಮಸ್ಯೆಗಳ ಶೀಘ್ರ ಪರಿಹಾರಕ್ಕೆ ಸಕಾರಾತ್ಮಕ ಭರವಸೆ ನೀಡಿರುವುದು ಗಮನಾರ್ಹವಾಗಿದೆ.

img 20260423 wa00563009036396786862422 ವಿದ್ಯಾರ್ಥಿಗಳ ಹಿತಕ್ಕಾಗಿ ಎಬಿವಿಪಿ ಧ್ವನಿ: ಹಲವು ಪ್ರಮುಖಬೇಡಿಕೆಗಳನ್ನು ಕುವೆಂಪು ವಿಶ್ವವಿದ್ಯಾಲಯದ ಮುಂದಿಟ್ಟ ಸಂಘಟನೆ, ವಿದ್ಯಾರ್ಥಿಗಳ ಸಮಸ್ಯೆಗಳಿಗೆ ತ್ವರಿತ ಪರಿಹಾರಕ್ಕೆ ಒತ್ತಾಯ
img 20260427 wa00136912940341341797723 ವಿದ್ಯಾರ್ಥಿಗಳ ಹಿತಕ್ಕಾಗಿ ಎಬಿವಿಪಿ ಧ್ವನಿ: ಹಲವು ಪ್ರಮುಖಬೇಡಿಕೆಗಳನ್ನು ಕುವೆಂಪು ವಿಶ್ವವಿದ್ಯಾಲಯದ ಮುಂದಿಟ್ಟ ಸಂಘಟನೆ, ವಿದ್ಯಾರ್ಥಿಗಳ ಸಮಸ್ಯೆಗಳಿಗೆ ತ್ವರಿತ ಪರಿಹಾರಕ್ಕೆ ಒತ್ತಾಯ
img 20260110 wa00002045678033691253051 ವಿದ್ಯಾರ್ಥಿಗಳ ಹಿತಕ್ಕಾಗಿ ಎಬಿವಿಪಿ ಧ್ವನಿ: ಹಲವು ಪ್ರಮುಖಬೇಡಿಕೆಗಳನ್ನು ಕುವೆಂಪು ವಿಶ್ವವಿದ್ಯಾಲಯದ ಮುಂದಿಟ್ಟ ಸಂಘಟನೆ, ವಿದ್ಯಾರ್ಥಿಗಳ ಸಮಸ್ಯೆಗಳಿಗೆ ತ್ವರಿತ ಪರಿಹಾರಕ್ಕೆ ಒತ್ತಾಯ

Leave a Reply

Your email address will not be published. Required fields are marked *