ಯೋಗ ದೈಹಿಕ ಕಸರತ್ತಷ್ಟೇ ಅಲ್ಲ, ದೇಹ-ಮನಸ್ಸು-ಆತ್ಮವನ್ನು ಬೆಸೆಯುವ ಶಕ್ತಿ: ಹೆಚ್.ಆರ್. ಸುರೇಶ್
ಹೊಸನಗರ : ಯೋಗವು ಕೇವಲ ದೈಹಿಕ ಕಸರತ್ತು ಮಾಡುವುದಕ್ಕಷ್ಟೇ ಸೀಮಿತವಾಗಿಲ್ಲ. ಅದು ದೇಹ, ಮನಸ್ಸು ಹಾಗೂ ಆತ್ಮವನ್ನು ಒಂದಾಗಿಸುವ ಶಕ್ತಿಶಾಲಿ ಮಾಧ್ಯಮವಾಗಿದೆ ಎಂದು ಮಾವಿನಕೊಪ್ಪ ಸರ್ಕಾರಿ ಪ್ರಾಥಮಿಕ ಪಾಠಶಾಲೆಯ ಮುಖ್ಯೋಪಾಧ್ಯಾಯರಾದ ಹೆಚ್.ಆರ್. ಸುರೇಶ್ ಹೇಳಿದರು.

ಅವರು ಶಾಲೆಯಲ್ಲಿ 12ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿಗಳಿಗೆ ಯೋಗಾಭ್ಯಾಸ ಹಾಗೂ ತರಬೇತಿ ಕಾರ್ಯಕ್ರಮ ನಡೆಸಿ ಮಾತನಾಡಿದರು.
ಭಾರತೀಯ ಸಂಸ್ಕೃತಿಯ ಅಮೂಲ್ಯ ಕೊಡುಗೆಯಾದ ಯೋಗವನ್ನು ಜಗತ್ತಿನಾದ್ಯಂತ ಸ್ವೀಕರಿಸಲಾಗಿದೆ. ಪ್ರತಿಯೊಬ್ಬರೂ ತಮ್ಮ ದೈನಂದಿನ ಜೀವನದಲ್ಲಿ ಯೋಗವನ್ನು ಅಳವಡಿಸಿಕೊಳ್ಳುವುದರಿಂದ ಮಾನಸಿಕ ಒತ್ತಡಗಳಿಂದ ಮುಕ್ತರಾಗಿ ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬಹುದು ಎಂದು ತಿಳಿಸಿದರು.

















Leave a Reply