ರಿಪ್ಪನ್ ಪೇಟೆ: ಪಟ್ಟಣದಲ್ಲಿ ಇಂದು ಸಂಜೆ ಸಂಭವಿಸಿದ ಭಾರಿ ಗಾಳಿ-ಮಳೆ ಹಾಗೂ ಸಿಡಿಲಿನ ಪರಿಣಾಮವಾಗಿ ಶ್ರೀ ರಾಮನಗರದಲ್ಲಿರುವ ಶಿಕ್ಷಕ ಗುರುಮೂರ್ತಿ ಅವರ ಮನೆ ಹಿಂಭಾಗದ ಖಾಲಿ ನಿವೇಶನದಲ್ಲಿದ್ದ ತೆಂಗಿನ ಮರಕ್ಕೆ ಸಿಡಿಲು ಬಡಿದು ಅದು ಹೊತ್ತಿ ಉರಿದ ಘಟನೆ ಆತಂಕಕ್ಕೆ ಕಾರಣವಾಯಿತು.
ಸ್ಥಳೀಯರ ಮಾಹಿತಿ ಪ್ರಕಾರ, ಮಳೆ ಆರಂಭವಾಗುತ್ತಿದ್ದಂತೆ ಗಾಳಿ ತೀವ್ರಗೊಂಡು, ಆಕಸ್ಮಿಕವಾಗಿ ಸಿಡಿಲು ಬಡಿದ ಪರಿಣಾಮ ತೆಂಗಿನ ಮರಕ್ಕೆ ಬೆಂಕಿ ಹೊತ್ತಿಕೊಂಡಿತು. ಕೆಲ ಹೊತ್ತಿನವರೆಗೆ ಮರ ಉರಿದರೂ, ನಂತರ ಮಳೆಯ ಕಾರಣದಿಂದಲೇ ಬೆಂಕಿ ತಾನೇ ನಂದಿತು ಎಂದು ತಿಳಿದುಬಂದಿದೆ. ಅದೃಷ್ಟವಶಾತ್ ಘಟನೆ ನಡೆದ ಸ್ಥಳ ಖಾಲಿ ನಿವೇಶನವಾಗಿದ್ದರಿಂದ ಯಾವುದೇ ಪ್ರಾಣಾಪಾಯ ಅಥವಾ ಆಸ್ತಿ ಹಾನಿ ಸಂಭವಿಸಿಲ್ಲ. ಸಮೀಪದ ಮನೆಗಳಿಗೂ ಯಾವುದೇ ಹಾನಿಯಾಗಿಲ್ಲವೆಂದು ಸ್ಥಳೀಯರು ತಿಳಿಸಿದ್ದಾರೆ.ಘಟನೆ ಬಳಿಕ ಸ್ಥಳೀಯರು ಆತಂಕಗೊಂಡರೂ, ದೊಡ್ಡ ಅನಾಹುತ ತಪ್ಪಿದ ಹಿನ್ನೆಲೆಯಲ್ಲಿ ನಿಟ್ಟುಸಿರು ಬಿಟ್ಟಿದ್ದಾರೆ.
















Leave a Reply