ರಿಪ್ಪನ್‌ಪೇಟೆ: ಬಸ್ ನಿಲ್ದಾಣದಲ್ಲಿ ನವಜಾತ ಶಿಶುವನ್ನು ತ್ಯಜಿಸಿದ್ದ ಪ್ರಕರಣ ಭೇದಿಸಿದ ಪೊಲೀಸರು; ಸಾಗರದ ಯುವಕ-ಯುವತಿ ವಶಕ್ಕೆ

ರಿಪ್ಪನ್‌ಪೇಟೆ ಸಮೀಪದ ಗವಟೂರು ಬಸ್ ನಿಲ್ದಾಣದಲ್ಲಿ ನವಜಾತ ಹೆಣ್ಣು ಶಿಶುವನ್ನು ತ್ಯಜಿಸಿದ್ದ ಪ್ರಕರಣವನ್ನು ರಿಪ್ಪನ್‌ಪೇಟೆ ಪೊಲೀಸರು ತಾಂತ್ರಿಕ ಸಾಕ್ಷ್ಯಗಳು ಹಾಗೂ ಟವರ್ ಡಂಪ್ ವಿಶ್ಲೇಷಣೆಯ ನೆರವಿನಿಂದ ಭೇದಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಗರ ಮೂಲದ ಯುವಕ ಮತ್ತು ಯುವತಿಯನ್ನು ವಶಕ್ಕೆ ಪಡೆದು ತನಿಖೆ ಮುಂದುವರಿಸಿದ್ದಾರೆ.