
ಹೊಸನಗರ : ಫೆಬ್ರವರಿ 15 ರಂದು ಮಹಾಶಿವರಾತ್ರಿಯ ಅಂಗವಾಗಿ ಸಮೀಪದ ಸದಾನಂದ ಶಿವಯೋಗಾಶ್ರಮ ಮೂಲೆಗದ್ದೆ ಮಠದಲ್ಲಿ ಮಹಾಶಿವರಾತ್ರಿಯ ಜಾಗರಣೆ ಮತ್ತು ಇಷ್ಟಲಿಂಗ ಮಹಾಪೂಜೆಯ ಮ.ನಿ.ಪ್ರ.ಅಭಿನವ ಚನ್ನಬಸವ ಮಹಾಸ್ವಾಮಿಜಿಯವರ ನೇತೃತ್ವದಲ್ಲಿ ಜರುಗಲಿದೆ ಎಂದು ಮಠದ ಪ್ರಕಟಣೆ ತಿಳಿಸಿದೆ.
ಲೋಕಕಲ್ಯಾರ್ಥಾವಾಗಿ ಮಠದ ಕರ್ತೃ ಗದ್ದುಗೆಗೆ ವಿಶೇಷ ಪೂಜೆ ನಂತರ ಮಹಾಶಿವರಾತ್ರಿಯ ಅಂಗವಾಗಿ ಇಷ್ಟಲಿಂಗಪೂಜೆ, ಜಾಗರಣೆ ಸೇರಿದಂತೆ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ಜರುಗಲಿದ್ದು ಸಕಲ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ದರ್ಶನಾಶೀರ್ವಾದ ಪಡೆಯುವಂತೆ ಮಠದ ಪ್ರಕಟಣೆ ತಿಳಿಸಿದೆ.












Leave a Reply